ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15ಕ್ಕೆ ಏರಿದ ಕಪ್ಪು ಶಿಲೀಂಧ್ರ ಸೋಂಕು

​ಪ್ರಜಾವಾಣಿ ವಾರ್ತೆ
Published 24 ಮೇ 2021, 6:29 IST
Last Updated 24 ಮೇ 2021, 6:29 IST

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಕಪ್ಪು ಶಿಲೀಂಧ್ರ ಸೋಂಕಿನ 1 ಪ್ರಕರಣಭಾನುವಾರ ದಾಖಲಾಗಿದ್ದು, ಸೋಂಕು ತಗುಲಿದವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ’ ಎಂದು ಡಿಎಚ್‌ಒ ಡಾ. ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸೋಂಕು ದೃಢಪಟ್ಟವರಲ್ಲಿ 6 ಮಂದಿ ದಕ್ಷಿಣ ಕನ್ನಡ ಜಿಲ್ಲೆಯವರು. ಉಳಿದ 9 ಜನರು ಇತರ ಜಿಲ್ಲೆಯವರಾಗಿದ್ದಾರೆ. ಈ ಸೋಂಕಿಗೆ ತುತ್ತಾಗಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT