ಪ್ರಜಾವಾಣಿ ವಾರ್ತೆ
ಮಂಗಳೂರು: ಜಿಲ್ಲೆಯಲ್ಲಿ ಬುಧವಾರ ಹೊಸ 2 ಕಪ್ಪುಶಿಲೀಂಧ್ರ ಬಾಧಿತ ಪ್ರಕರಣಗಳು ದಾಖಲಾಗಿವೆ. ಈ ಇಬ್ಬರೂ ದಕ್ಷಿಣ ಕನ್ನಡ ಜಿಲ್ಲೆಯವರಾದ್ದು, ಚಿಕಿತ್ಸೆಗೆ ದಾಖಲಾಗಿದ್ದಾರೆ.
ಸದ್ಯಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ 40ಕ್ಕೆ ಏರಿವೆ. ಇವರಲ್ಲಿ ದಕ್ಷಿಣ ಕನ್ನಡದ 9 ಮಂದಿ ಹಾಗೂ ಹೊರ ಜಿಲ್ಲೆಯ 31 ಮಂದಿ ಇದ್ದಾರೆ. ಇದುವರೆಗೆ ಒಟ್ಟು 20 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ದಕ್ಷಿಣ ಕನ್ನಡ ಇಬ್ಬರು, ಹೊರ ಜಿಲ್ಲೆಗಳ 14 ಮಂದಿ ಸೇರಿದಂತೆ ಒಟ್ಟು 16 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.