ADVERTISEMENT

ಮಂಗಳೂರು ವಿವಿಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2023, 12:40 IST
Last Updated 2 ಡಿಸೆಂಬರ್ 2023, 12:40 IST
ರಕ್ತದಾನ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರೊ.ಜಯರಾಜ್ ಅಮೀನ್ ಮಾತನಾಡಿದರು
ರಕ್ತದಾನ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರೊ.ಜಯರಾಜ್ ಅಮೀನ್ ಮಾತನಾಡಿದರು   

ಮುಡಿಪು: ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ, ಸಮಾಜಕಾರ್ಯ ವಿಭಾಗ ಹಾಗೂ ಪುರುಷರ ವಸತಿ ನಿಲಯ ಕೌನ್ಸಿಲ್ ವತಿಯಿಂದ ವಿಶ್ವ ಏಡ್ಸ್ ದಿನದ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಯರಾಜ್ ಅಮೀನ್ ಉದ್ಘಾಟಿಸಿದರು.

ಕಣಚೂರು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರೋಹನ್ ಮೋನಿಸ್ ಮುಖ್ಯ ಅತಿಥಿಯಾಗಿದ್ದರು.

ADVERTISEMENT

ಶ್ರೀನಿವಾಸ ವಿವಿಯ ಪ್ರಾಧ್ಯಾಪಕರಾದ ಲವಿನಾ ಡಿಮೆಲ್ಲೋ ಏಡ್ಸ್ ಬಗ್ಗೆ ಮಾಹಿತಿ ನೀಡಿದರು.

ಸಮಾಜಕಾರ್ಯ ವಿಭಾಗದ ಮೋಹನ್ ಸಿಂಘೆ, ಸವಿತಾ ಕುಮಾರಿ, ಲಯನ್ಸ್ ಕ್ಲಬ್‌ನ ನಾಗೇಶ್ ಇದ್ದರು.

ಗೋವಿಂದರಾಜು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸುಮಾರು 98 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.