ಮೂಲ್ಕಿ: ‘ಸಾಧ್ಯ ಆಂಡ ಯಾನ್ ಕಟೀಲ್ದ ಬ್ರಹ್ಮಕಲಶೋತ್ಸವಗ್ ಬರ್ಪೆ’ (ಸಾಧ್ಯವಾದರೆ ನಾನು ಕಟೀಲಿನ ಬ್ರಹ್ಮಕಲಶೋತ್ಸವಕ್ಕೆ ಬರುತ್ತೇನೆ)
–ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಅರ್ಚಕರಲ್ಲಿ ತುಳುವಿನಲ್ಲಿ ಹೇಳಿದರು.
ದೇವಳದ ವತಿಯಿಂದ ಶಿಲ್ಪಾ ಶೆಟ್ಟಿ ಅವರನ್ನು ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿ ಗೌರವಿಸಿದರು. ಮುಂದಿನ ಜನವರಿಯಲ್ಲಿ ದೇವಳದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿದರು.
12 ವರ್ಷಗಳ ಹಿಂದೆ ದೇವಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭ ಮುಂಬೈ ಸಮಿತಿಯವರು ನೀಡಿದ್ದ ಚಿನ್ನದ ಕೊಡಪಾನದಲ್ಲಿ ಶಿಲ್ಪ ಶೆಟ್ಟಿಯವರ ಹೆಸರಿದ್ದು, ಅದನ್ನು ಅವರಿಗೆ ತೋರಿಸಲಾಯಿತು. ಇದನ್ನು ನೋಡಿ ಶಿಲ್ಪಾ ಅವರು ಸಂತೋಷಪಟ್ಟರು. ಹರಿನಾರಾಯಣದಾಸ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ, ಸದಾನಂದ ಆಸ್ರಣ್ಣ, ಡಾ.ಸಿಂಧು, ನಿತೇಶ್ ಶೆಟ್ಟಿ ಎಕ್ಕಾರು ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.