ADVERTISEMENT

ಜಾನಪದ- ವೈದಿಕ ಎರಡೂ ಒಂದೇ; ಕೃತಿ ಬಿಡುಗಡೆಗೊಳಿಸಿದ ಕೆ.ಎಲ್. ಕುಂಡಂತಾಯ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 3:50 IST
Last Updated 9 ಜನವರಿ 2021, 3:50 IST
ಮಂಗಳೂರಿನ ಕದ್ರಿಯಲ್ಲಿ ನಡೆದ ಸಮಾರಂಭದಲ್ಲಿ ‘ಶ್ರೀ ಚಮಕಾಭರಣಂ ಕೃತಿಯನ್ನು ಲಕ್ಷ್ಮಿನಾರಾಯಣ ಕುಂಡಂತಾಯ ಬಿಡುಗಡೆ ಮಾಡಿದರು.
ಮಂಗಳೂರಿನ ಕದ್ರಿಯಲ್ಲಿ ನಡೆದ ಸಮಾರಂಭದಲ್ಲಿ ‘ಶ್ರೀ ಚಮಕಾಭರಣಂ ಕೃತಿಯನ್ನು ಲಕ್ಷ್ಮಿನಾರಾಯಣ ಕುಂಡಂತಾಯ ಬಿಡುಗಡೆ ಮಾಡಿದರು.   

ಮಂಗಳೂರು: ‘ಜಾನಪದ ಮತ್ತು ವೈದಿಕ ಪರಸ್ಪರ ವಿರೋಧವಲ್ಲ, ಅವೆರಡು ಒಂದೇ’ ಎಂದು ವಿದ್ವಾಂಸ ಕೆ. ಲಕ್ಷ್ಮೀನಾರಾಯಣ ಕುಂಡಂತಾಯ ಹೇಳಿದರು.

ಕದ್ರಿ ದೇಗುಲದ ಅರ್ಚಕ ವಿದ್ವಾನ್ ಪ್ರಭಾಕರ ಅಡಿಗರು ಬರೆದಿರುವ ಸಂಹಿತಾ- ಪದ- ಕ್ರಮ- ಜಟಾ- ಘನ ಪಾಠ ಸಹಿತವಾಗಿರುವ ‘ಶ್ರೀ ಚಮಕಾಭರಣಂ’ ಕೃತಿಯನ್ನು ಕದ್ರಿ ಮಲ್ಲಿಕಾ ಬಡಾವಣೆಯ ಮಂಜುಪ್ರಾಸಾದದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ವೇದಕಾಲದಲ್ಲಿಯೇ ಚಾರ್ವಾಕನಂತಹ ವೇದ ವಿರೋಧಿಗಳಿದ್ದರು. ಈ ಕಾಲದಲ್ಲಿ ವೇದ ವಿರೋಧ ದೊಡ್ಡ ವಿಚಾರವಲ್ಲ. ಜಾನಪದ ಮತ್ತು ವೈದಿಕ ವಿರುದ್ಧ ದಿಕ್ಕಿನಲ್ಲಿದೆ ಎಂದು ವಾದ ನಡೆಯುತ್ತಲೇ ಬಂದಿದೆ. ಆದರೆ ಅವರೆರಡು ಸುಗಮ ಸಮಾಗಮವಾಗಿದೆ. ಅವೆರಡೂ ಒಂದೇ ಎಂದು ವಿಶ್ಲೇಷಿಸಿದರು.

ADVERTISEMENT

ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ, ಕಬ್ಬಿಣದ ಕಡಲೆಯಾದ ವೇದದ ಧರ್ಮಜ್ಞಾನವನ್ನು ದಾಸವರೇಣ್ಯರು ಸುಲಭ, ಸರಳರೂಪದಲ್ಲಿ, ವಚನಗಳ ಮೂಲಕ ಸಮಾಜಕ್ಕೆ ತಿಳಿಸಿದರು. ವಿಕೃತವನ್ನೂ ವೈಭವೀಕರಿಸುವುದು, ವಿಷವನ್ನು ಹಂಚುವುದು ಸಾಹಿತ್ಯವಲ್ಲ. ಸದ್ವಿಚಾರ ಹಂಚುವುದೇ ಸಾಹಿತ್ಯ. ಇಂಥ ಕೃತಿಗಳು ಸದ್ವಿಚಾರ ಪಸರಿಸುತ್ತದೆ ಎಂದರು.

ಕುಂಜತ್ತೋಡಿ ವಾಸುದೇವ ಅಲೆವೂರಾಯ, ಡಾ.ಸುಧೀಂದ್ರ, ಬಸವೇಶ್ವರ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಮಾತನಾಡಿದರು. ಪ್ರಕಾಶಕ ರಘುರಾಮಪ್ರಸಾದ್ ಪಿದಮಲೆ ಅವರನ್ನು ಅಭಿನಂದಿಸಲಾಯಿತು. ಅನುಪಮಾ ಅಡಿಗ ಇದ್ದರು. ಪ್ರಭಾಕರ ಅಡಿಗ ಕೃತಿ ಪರಿಚಯಿಸಿದರು. ಸುಧಾಕರ ರಾವ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.