ADVERTISEMENT

‘ಬೇರೆಯೇ ಮಾತು’ ಬಿಡುಗಡೆ 20ಕ್ಕೆ

​ಪ್ರಜಾವಾಣಿ ವಾರ್ತೆ
Published 16 ಮೇ 2022, 15:49 IST
Last Updated 16 ಮೇ 2022, 15:49 IST

ಮಂಗಳೂರು: ರಂಗಚಾವಡಿ ಸಾಹಿತ್ಯಿಕ - ಸಾಂಸ್ಕೃತಿಕ ಸಂಘಟನೆಯ ಆಶ್ರಯದಲ್ಲಿ ಮೇ 20ರಂದು ಬೆಳಿಗ್ಗೆ 10.30ಕ್ಕೆ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಬರಹಗಳ ಸಂಕಲನ ‘ಬೇರೆಯೇ ಮಾತು’ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪುಸ್ತಕ ಬಿಡುಗಡೆ ಮಾಡುವರು. ಪುಸ್ತಕದ ಸಂಪಾದಕ ದಿನೇಶ್ ಅಮೀನ್‌ಮಟ್ಟು ಪುಸ್ತಕದ ಬಗ್ಗೆ ಮಾತನಾಡುವರು. ಪತ್ರಕರ್ತ ಅಬ್ದುಸ್ಸಲಾಮ್ ಪುತ್ತಿಗೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಗನ್ನಾಥ ಶೆಟ್ಟಿ ಬಾಳ ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT