ಮಂಗಳೂರು: ರಂಗಚಾವಡಿ ಸಾಹಿತ್ಯಿಕ - ಸಾಂಸ್ಕೃತಿಕ ಸಂಘಟನೆಯ ಆಶ್ರಯದಲ್ಲಿ ಮೇ 20ರಂದು ಬೆಳಿಗ್ಗೆ 10.30ಕ್ಕೆ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಬರಹಗಳ ಸಂಕಲನ ‘ಬೇರೆಯೇ ಮಾತು’ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪುಸ್ತಕ ಬಿಡುಗಡೆ ಮಾಡುವರು. ಪುಸ್ತಕದ ಸಂಪಾದಕ ದಿನೇಶ್ ಅಮೀನ್ಮಟ್ಟು ಪುಸ್ತಕದ ಬಗ್ಗೆ ಮಾತನಾಡುವರು. ಪತ್ರಕರ್ತ ಅಬ್ದುಸ್ಸಲಾಮ್ ಪುತ್ತಿಗೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಗನ್ನಾಥ ಶೆಟ್ಟಿ ಬಾಳ ಭಾಗವಹಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.