ADVERTISEMENT

ಬಿಟ್ ಕಾಯಿನ್‌ಗೆ ಬೇಡಿಕೆಯಿಟ್ಟಿದ್ದ ಉಜಿರೆ ಬಾಲಕನ ಅಪಹರಣಕಾರರು ಕೋಲಾರದಲ್ಲಿ ಬಂಧನ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 3:13 IST
Last Updated 19 ಡಿಸೆಂಬರ್ 2020, 3:13 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮಂಗಳೂರು: ಅಪಹರಣಕ್ಕೆ ಒಳಗಾಗಿದ್ದ ಉಜಿರೆಯ 8 ವರ್ಷದ ಬಾಲಕನನ್ನು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕೂರ್ನಹೊಸಳ್ಳಿಯಲ್ಲಿ ಪತ್ತೆ ಮಾಡಲಾಗಿದೆ.

ಅಪಹರಣಕಾರರು ಮಂಜುನಾಥ ಎಂಬುವವರ ಮನೆಯಲ್ಲಿ ಬಾಲಕನನ್ನು ಇರಿಸಿದ್ದರು. ಕೋಲಾರ ಜಿಲ್ಲಾ ಪೊಲೀಸರ ನೆರವಿನೊಂದಿಗೆ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಕೋಮಲ್ ಮಂಡ್ಯದ ಗಂಗಾಧರ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಕೋಲಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5 ರ ಹೊತ್ತಿಗೆ ಪತ್ತೆ ಹಚ್ಚಿದರು. ಕೂಡಲೇ ಅಪಹರಣಕಾರರನ್ನು ಕೋಲಾರ ಪೊಲೀಸ್ ಠಾಣೆಗೆ ಕರೆತರಲಾಯಿತು.

ಬೆಳಿಗ್ಗೆ 11 ಕ್ಕೆ‌ ಕೋಲಾರ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗುತ್ತದೆ ಎನ್ನಲಾಗಿದ್ದು, ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ., ಸಬ್ ಇನ್‌ಸ್ಪೆಕ್ಟರ್ ನಂದಕುಮಾರ್, ಧರ್ಮಸ್ಥಳ ಠಾಣೆ ಸಬ್ ಇನ್‌ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದ ವಿಶೇಷ ತಂಡ ಹಾಜರು ಪಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.