ADVERTISEMENT

ಜನಾರ್ದನ ಪೂಜಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 27 ಜೂನ್ 2021, 13:04 IST
Last Updated 27 ಜೂನ್ 2021, 13:04 IST
ಜನಾರ್ದನ ಪೂಜಾರಿ
ಜನಾರ್ದನ ಪೂಜಾರಿ   

ಮಂಗಳೂರು: ಕಾಂಗ್ರೆಸ್‌ ಮುಖಂಡ ಬಿ. ಜನಾರ್ದನ ಪೂಜಾರಿ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವ ವ್ಯಕ್ತಿಯ ವಿರುದ್ಧ ಬಿರುವೆರ್‌ ಕುಡ್ಲ ಸಂಘಟನೆ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

‘ಜನಾರ್ದನ ಪೂಜಾರಿ ಅವರು ತಾವಿರುವ ಪಕ್ಷದಲ್ಲಿ ನಿರಂತರ ಅಧಿಕಾರ ಅನುಭವಿಸಿ, ಬಿಜೆಪಿ ಪರ ಬ್ಯಾಟಿಂಗ್‌ ಮಾಡುವ ವ್ಯಕ್ತಿ. ಈತನನ್ನು ಇಲ್ಲಿಯವರೆಗೆ ಹೈಕಮಾಂಡ್‌ ಕೂಡ ವಿರೋಧಿಸಿಲ್ಲ. ಒಂದು ವೇಳೆ ಈ ರೀತಿಯಾಗಿ ಅಲ್ಪಸಂಖ್ಯಾತ ವ್ಯಕ್ತಿ ಮಾತನಾಡಿದ್ದರೆ ಆ ವ್ಯಕ್ತಿಯನ್ನು ಕೂಡಲೇ ಕಾಂಗ್ರೆಸ್‌ ವಜಾ ಮಾಡುತ್ತಿತ್ತು. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎನ್ನುವ ಸಿದ್ಧಾಂತವನ್ನು ನಿಲ್ಲಿಸಿ ಎಂದು ರಶೀದ್‌ ಟಿಪ್ಪು ಹೆಸರಿನ ಫೇಸ್‌‌ಬುಕ್‌ ಖಾತೆಯಲ್ಲಿ ಬರೆಯಲಾಗಿದೆ. ಜನಾರ್ದನ ಪೂಜಾರಿ ಅವರ ಚಿತ್ರವನ್ನು ಅಪ್‌ಲೋಡ್ ಮಾಡಿ ಅವಹೇಳನಕಾರಿಯಾಗಿ ಬರೆದು ಪೋಸ್ಟ್‌ ಮಾಡಲಾಗಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT