ADVERTISEMENT

ಮಂಗಳೂರು: ಬಿಎಸ್ಎಫ್ ಯೋಧ ಹೃದಯಾಘಾತದಿಂದ ಸಾವು

​ಪ್ರಜಾವಾಣಿ ವಾರ್ತೆ
Published 1 ಜನವರಿ 2023, 7:11 IST
Last Updated 1 ಜನವರಿ 2023, 7:11 IST
 ಹರೀಶ್ ಕುಮಾರ್
ಹರೀಶ್ ಕುಮಾರ್   

ಮಂಗಳೂರು: ರಜೆ ಸಲುವಾಗಿ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ನಗರದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಮೃತರನ್ನು ಕುಲಶೇಖರ ಉಮಿಕಾನ ನಿವಾಸಿ ಹರೀಶ್ ಕುಮಾರ್ (43) ಎಂದು ಗುರುತಿಸಲಾಗಿದೆ. ಗಡಿ ಭದ್ರತಾ ಪಡೆಯಲ್ಲಿ (ಬಿಎಸ್‌ಎಫ್) ಅವರು 21ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ರಜೆ ಹಾಕಿ ಊರಿಗೆ ಬಂದಿದ್ದ ಅವರಿಗೆ ಶನಿವಾರ (ಡಿ. 31) ಹೃದಯಾಘಾತವಾಗಿತ್ತು.

ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, 6 ವರ್ಷದ ಪುತ್ರ ಹಾಗೂ ಒಂದುವರೆ ವರ್ಷದ ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT