ADVERTISEMENT

ಕಡಬ: ಬಸ್ ಚಾಲಕ ನಿಧನ, ಹೆಚ್1ಎನ್1 ಶಂಕೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 10:28 IST
Last Updated 4 ಮಾರ್ಚ್ 2020, 10:28 IST
ಕುಶಾಲಪ್ಪ ಗೌಡ.
ಕುಶಾಲಪ್ಪ ಗೌಡ.   

ಕಡಬ(ಉಪ್ಪಿನಂಗಡಿ): ಮಂಗಳೂರಿನಲ್ಲಿ ಖಾಸಗಿ ಬಸ್‌ನಲ್ಲಿ ಚಾಲಕರಾಗಿದ್ದ 102-ನೆಕ್ಕಿಲಾಡಿ ಗ್ರಾಮದ ಕಲ್ಪುರೆ ನಿವಾಸಿ ಕುಶಾಲಪ್ಪ ಗೌಡ(50) ಎಂಬುವರು ಮಂಗಳವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಎಚ್1ಎನ್1 ಜ್ವರದಿಂದ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

20 ದಿನದಿಂದ ಜ್ವರದಿಂದ ಬಳಲುತ್ತಿದ್ದ ಅವರು ಆರಂಭದಲ್ಲಿ ಕಡಬ ಹಾಗೂ ಕಾಣಿಯೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಕಡಿಮೆಯಾಗದ ಕಾರಣ ಅವರನ್ನು ವಾರದ ಹಿಂದೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಆತಂಕ ಬೇಡ-ಡಿಎಚ್ಒ: ‘ಕುಶಾಲಪ್ಪ ಗೌಡ ಅವರು ವೈರಲ್ ನ್ಯುಮೋನಿಯಾದಿಂದ ಮೃತಪಟ್ಟಿರುವುದಾಗಿ ಪ್ರಾಥಮಿಕ ವರದಿ ಬಂದಿದೆ. ಇವರು ಎಚ್1ಎನ್1ನಿಂದಲೇ ಮೃತಪಟ್ಟಿದ್ದಾರೆ ಎಂದು ಖಚಿತವಾಗಿಲ್ಲ. ವೈರಲ್ ನ್ಯುಮೋನಿಯಾದಲ್ಲಿಯೂ ಎಚ್1ಎನ್1 ಜ್ವರದ ರೀತಿಯ ಗುಣಲಕ್ಷಣಗಳು ಇರುವುದರಿಂದಾಗಿ ಗೊಂದಲ ಉಂಟಾಗಿದೆ. ಪರಿಸರದಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಯಾರೂ ಈ ಬಗ್ಗೆ ಆತಂಕ ಪಡಬೇಕಾಗಿಲ್ಲ’ ಎಂದು ಜಿಲ್ಲಾ ವೈದ್ಯಾಧಿಕಾರಿ(ಡಿಎಚ್ಒ) ಡಾ. ಸಿಕಂದರ್ ಪಾಷಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.