ಉಳ್ಳಾಲ: ಹಿಂದೂ ದೇವರುಗಳ ನಿಂದಿಸಿದ ತೊಕ್ಕೊಟ್ಟು ನಿವಾಸಿ ಉದ್ಯಮಿಯನ್ನು ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಆರೋಪಿ ಹಿಂದೂ ದೇವರುಗಳ ವಿರುದ್ಧ ನಿಂದನೆಯ ಮಾತುಗಳನ್ನು ಆಡಿದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಸತಿ ಸಂಕೀರ್ಣದಲ್ಲಿ ಇರುವ ಸ್ವಾಲಿಝ್ ಇಕ್ಬಾಲ್ ಬಂಧಿತ. ಫರ್ನಿಚರ್ ಅಂಗಡಿ ಸಹಿತ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದ ಸ್ವಾಲಿಝ್ ಇಕ್ಬಾಲ್, ಚಾಮುಂಡೇಶ್ವರಿ ದೇವಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೊ ಮೂರು ದಿನಗಳಿಂದ ವೈರಲ್ ಆಗಿತ್ತು.
ಈ ವಿಡಿಯೊ ವೈರಲ್ ಆಗುತ್ತಿದ್ದಂತೆ, ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟಕರು ದೂರು ದಾಖಲಿಸಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿಯೂ ದೂರು ದಾಖಲಾಗಿದ್ದು, ಇಂದು ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.