ADVERTISEMENT

ಬೈಕಂಪಾಡಿ: ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 6:34 IST
Last Updated 28 ಜನವರಿ 2023, 6:34 IST

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇದ ದುರ್ಗಾ ಮೋಟಾರ್ಸ್ ವರ್ಕ್ ಶಾಪ್‌ನ ಚಾವಣಿಯ ಶೀಟ್ ಮೇಲೆ ಸೋಲಾರ್ ಪ್ಯಾನಲ್‌ನ ವಯರಿಂಗ್ ಮತ್ತು ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

‘ಮೃತರನ್ನು ಎಕ್ಕೂರು ಗುಡ್ಡೆ ನಿವಾಸಿ ವರುಣ್ (24) ಎಂದು ಗುರುತಿಸಲಾಗಿದೆ. ಸಹಕಾರ್ಮಿಕ ಮೋಹನ್‌ ಕುಮಾರ್‌ ದೂರು ನೀಡಿದ್ದಾರೆ. ಕೆಲಸ ವಹಿಸಿಕೊಂಡಿದ್ದ ಗುತ್ತಿಗೆದಾರ ರವಿ ಕಾರ್ಮಿಕರ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.