ಉಳ್ಳಾಲ(ದಕ್ಷಿಣ ಕನ್ನಡ): ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿರುವ ಘಟನೆ ಇಲ್ಲಿಗೆ ಸಮೀಪದ ಕೋಟೆಕಾರು ಬೀರಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ ತಡರಾತ್ರಿಯಲ್ಲಿ ನಡೆದಿದೆ. ಸ್ಥಳೀಯ ಯುವಕರ ತಂಡ ತಕ್ಷಣ ಕಾರು ಚಾಲಕನನ್ನು ಹೊರಗೆಳೆದು ರಕ್ಷಿಸಿ ಮಾನವೀಯತೆ ಮೆರೆದಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಹಳೆಯಂಗಡಿ ನಿವಾಸಿ ನೌಫಾಲ್ ಗಾಯಗೊಂಡವರು. ತಲಪಾಡಿ ಕಡೆಯಿಂದ ಹಳೆಯಂಗಡಿಯತ್ತ ತೆರಳುವ ವೇಳೆ ಕಾರು ನಿಯಂತ್ರಣ ಕಳೆದು ರಾಷ್ಟ್ರೀಯ ಹೆದ್ದಾರಿಯ ವಿಭಜಕ ಏರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಕಾರು ಪಲ್ಟಿ ಹೊಡೆದು, ಚಾಲಕ ಅದರೊಳಗೆ ಸಿಲುಕಿದ್ದರು. ತಕ್ಷಣ ಸ್ಥಳೀಯ ಯುವಕರ ತಂಡ ಸ್ಥಳಕ್ಕೆ ದೌಡಾಯಿಸಿ ನೌಫಾಲ್ ಅವರನ್ನು ಹೊರಗೆಳೆದು ಬೇರೆ ಕಾರಿನ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕರ ಸಾಮಾಜಿಕ ಕಳಕಳಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.