ADVERTISEMENT

ನೇತ್ರಾವತಿ ಸೇತುವೆ ಮೇಲೆ ಕಾರು–ರಿಕ್ಷಾ ಡಿಕ್ಕಿ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 6:05 IST
Last Updated 27 ಮಾರ್ಚ್ 2021, 6:05 IST
ಕಾರು–ಆಟೊ ಡಿಕ್ಕಿ
ಕಾರು–ಆಟೊ ಡಿಕ್ಕಿ   

ಉಳ್ಳಾಲ (ದಕ್ಷಿಣ ಕನ್ನಡ): ಇಲ್ಲಿನ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಬೆಳಿಗ್ಗೆ ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ, ಪಜೀರು ಸೇನೆರೆಬೈಲು ಶ್ಯಾಮಪ್ರಸಾದ್ (45) ಮೃತಪಟ್ಟಿದ್ದಾರೆ.

ಅವರು ಮಂಗಳೂರಿನಿಂದ ವಾಪಸ್ ಬರುವ ಸಂದರ್ಭದಲ್ಲಿ ರಿಕ್ಷಾ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದೆ. ಆಗ ರಿಕ್ಷಾದಿಂದ ಚಾಲಕ ಹೊರಗೆಸೆಯಲ್ಪಟ್ಟು, ಅವರ ಮೇಲೆ ಕಾರು ಚಲಿಸಿದೆ. ಅಸೈಗೋಳಿಯ ತಂಗುದಾಣದಲ್ಲಿ ಅವರು ರಿಕ್ಷಾವನ್ನು ಬಾಡಿಗೆಗೆ ನಿಲ್ಲಿಸುತ್ತಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT