ಮಂಗಳೂರು: ಉಜಿರೆಯಿಂದ ಗುರುವಾರ ಸಂಜೆ ಅಪರಿಹರಿಸಲಾಗಿರುವ 8 ವರ್ಷದ ಬಾಲಕನ ಬಿಡುಗಡೆಗೆ ₹17 ಕೋಟಿನೀಡುವಂತೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.
ಗುರುವಾರ ಸಂಜೆ ವೇಳೆ ಮನೆಯಂಗಳದಲ್ಲಿ ಆಟವಾಡುತಿದ್ದ 8 ವರ್ಷದ ಮಗುವನ್ನು ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಅಪಹರಣ ಮಾಡಿದ್ದರು.
ಉಜಿರೆಯ ಬಿಜೋಯ್ ಏಜೆನ್ಸಿಸ್ ಮಾಲೀಕ, ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ಅಪಹರಣಗೊಂಡ ಬಾಲಕ. ಬಾಲಕನ ಅಜ್ಜ ಎ.ಕೆ. ಶಿವನ್ ಎದುರೇ ಈ ಕೃತ್ಯ ನಡೆದಿದೆ.
ಅಪಹರಣದ ಬಳಿಕ ಅಪಹರಣಕಾರರು ಬಾಲಕನ ಮನೆಯವರನ್ನು ಫೋನ್ ಮೂಲಕ ಸಂಪರ್ಕಿಸಿ ₹17 ಕೋಟಿ ಕೋಟಿಯನ್ನು ಬಿಟ್ ಕಾಯಿನ್ ರೂಪದಲ್ಲಿ ನೀಡುವಂತೆಯೂ ತಿಳಿಸಿದ್ದಾರೆ. ಈ ಬಗ್ಗೆ ಬಾಲಕನ ಅಜ್ಜ ಎ.ಕೆ. ಶಿವನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.