ADVERTISEMENT

ಕ್ರೈಸ್ತರ ಮೇಲೆ ದಾಳಿ: ಬೆಂದೂರ್‌ ಚರ್ಚ್‌ನಲ್ಲಿ ಮೌನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 4:42 IST
Last Updated 4 ಜನವರಿ 2026, 4:42 IST
ಬೆಂದೂರಿನ ಸಂತ ಸೆಬಾಸ್ಟಿಯನ್ ಚರ್ಚ್ ಎದುರು ಮೌನ ಪ್ರತಿಭಟನೆ ನಡೆಯಿತು
ಬೆಂದೂರಿನ ಸಂತ ಸೆಬಾಸ್ಟಿಯನ್ ಚರ್ಚ್ ಎದುರು ಮೌನ ಪ್ರತಿಭಟನೆ ನಡೆಯಿತು   

ಮಂಗಳೂರು: ಕ್ರಿಸ್‌ಮಸ್ ಹಬ್ಬದ ಆಚರಣೆ ವೇಳೆ ದೇಶವ್ಯಾಪ್ತಿ ಕ್ರೈಸ್ತರ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ, ಬೆಂದೂರಿನ ಸಂತ ಸೆಬಾಸ್ಟಿಯನ್ ಚರ್ಚ್ ವತಿಯಿಂದ ಶನಿವರ ಮೌನ ಪ್ರತಿಭಟನೆ ನಡೆಸಲಾಯಿತು.

ಚರ್ಚ್‌ನ ಧರ್ಮಗುರು ವಾಲ್ಟರ್ ಡಿಸೋಜ, ಸಹಾಯಕ ಧರ್ಮಗುರು ವಿವೇಕ್ ಪಿಂಟೊ ಹಾಗೂ ಓಜ್ಮೊಂಡ್ ಡಿಸೋಜ, ಅರುಣ್ ಲೋಬೊ, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.

ಭಕ್ತರು ಮೊಂಬತ್ತಿ ಬೆಳಗಿಸಿ, ಪ್ರಾರ್ಥಿಸುವ ಮೂಲಕ ದಾಳಿಯನ್ನು ಖಂಡಿಸಿದರು. ಶಾಂತಿ ಮತ್ತು ನ್ಯಾಯಕ್ಕಾಗಿ ಏಕತೆ ಮತ್ತು ಸೌಹಾರ್ದ ಅಗತ್ಯವೆಂದು ಸಾರಿದರು. ಚರ್ಚ್‌ನ ಭಕ್ತರು, ಕಾನ್ವೆಂಟ್‌ನ ಭಗಿನಿಯರು, ವಿವಿಧ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.