ಉಳ್ಳಾಲ: ಜಿಲ್ಲೆಯಲ್ಲಿ ಮರಳು ಮತ್ತು ಕೆಂಪು ಕಲ್ಲು ನಿರಂತರವಾಗಿ ಸಿಗುವಂತೆ ಕೂಡಲೇ ಕಾನೂನು ರೂಪಿಸಲು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ನಾಟೆಕಲ್ನಲ್ಲಿರುವ ತಾಲ್ಲೂಕು ಕಚೇರಿಗೆ ರ್ಯಾಲಿ ನಡೆಸಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ನೇತೃತ್ವವನ್ನು ಉಳ್ಳಾಲ ತಾಲ್ಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಜನಾರ್ದನ್ ಕುತ್ತಾರ್ ವಹಿಸಿದ್ದರು.
ಪ್ರಮುಖರಾದ ವಸಂತ ಆಚಾರಿ, ಯೋಗೀಶ್ ಜಪ್ಪಿನಮೊಗರು, ಜಯಂತ್ ನಾಯಕ್, ಸುನಿಲ್ ಕುಮಾರ್ ಬಜಾಲ್, ಸುಕುಮಾರ್ ತೊಕ್ಕೊಟ್ಟು, ಕೃಷ್ಣಪ್ಪ ಸಾಲಿಯಾನ್, ಸುಧಾಕರ್ ಆಳ್ವ, ಶೇಖರ್ ಕುಂದರ್, ರಾಮಚಂದ್ರ ಪಜೀರ್, ಇಬ್ರಾಹಿಂ ಮದಕ, ರೋಹಿದಾಸ್ ಭಟ್ನಗರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.