ಮಂಗಳೂರು: ಡಬಲ್ ಎಂಜಿನ್ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸುವವರಿಗೆ ನಮ್ಮ ಅಭಿವೃದ್ಧಿಯೇ ಉತ್ತರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡ ಹಲವು ಯೋಜನೆಗಳ ಲೋಕಾರ್ಪಣೆ ಸಮಾವೇಶದಲ್ಲಿ ಮಾತನಾಡಿದ ಬೊಮ್ಮಾಯಿ,ಡಬಲ್ ಎಂಜಿನ್ ಸರ್ಕಾರ ಕರ್ನಾಟಕದ ಜತೆಗೆ ದೇಶದ ಆಭಿವೃದ್ಧಿಗೂ ಕಾರಣವಾಗಿದೆ. ಎಸ್ಇಜೆಡ್ ಮಾರ್ಗಸೂಚಿಗಳನ್ನು ಬದಲಿಸಬೇಕು ಎಂಬ 30 ವರ್ಷಗಳ ಬೇಡಿಕೆ ಈಗ ಈಡೇರಿದೆ. ಮೋದಿ ಅವರು ಸಿಆರ್ಜೆಡ್ ಮಾಸ್ಟರ್ ಪ್ಲಾನ್ಅನ್ನು ಅನುಮೋದಿಸಿದ್ದಾರೆ ಎಂದರು.
ರಾಜ್ಯದ ಎರಡು ಬಂದರುಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇನ್ನೆರಡು ಬಂದರುಗಳ ಸಂರ್ಥ್ಯವನ್ನು ಹೆಚ್ಚಿಸಲಾಗಿದೆ. ನವಕರ್ನಾಟಕದ ಅಭಿವೃದ್ಧಿಯಲ್ಲಿ ನವ ಭಾರತದ ಅಭಿವೃದ್ಧಿಯೂ ಅಡಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.