ADVERTISEMENT

ಸಮುದ್ರದಲ್ಲಿ ಸಿಲುಕಿದ್ದ 9 ಜನರನ್ನು ರಕ್ಷಣೆ ಮಾಡಿದ ಕರಾವಳಿ ಕಾವಲು ಪಡೆ

​ಪ್ರಜಾವಾಣಿ ವಾರ್ತೆ
Published 17 ಮೇ 2021, 9:28 IST
Last Updated 17 ಮೇ 2021, 9:28 IST
ಕೋರಮಂಡಲ ಎಕ್ಸ್‌ಪ್ರೆಸ್ ಟಗ್‌ನ 9 ಮಂದಿ ಸಿಬ್ಬಂದಿ ರಕ್ಷಣೆ
ಕೋರಮಂಡಲ ಎಕ್ಸ್‌ಪ್ರೆಸ್ ಟಗ್‌ನ 9 ಮಂದಿ ಸಿಬ್ಬಂದಿ ರಕ್ಷಣೆ   

ಮಂಗಳೂರು: ಸೋಮವಾರ ಮುಂಜಾನೆಯಿಂದ ನೌಕಾ ಪಡೆಯ ಹೆಲಿಕಾಪ್ಟರ್ ಕಾರ್ಯಾಚರಣೆ ಆರಂಭಿಸಿದ್ದು, ಟಗ್‌ನಲ್ಲಿ ಸಿಲುಕಿದ್ದ 9 ಜನರನ್ನು ರಕ್ಷಿಸಲಾಗಿದೆ ಎಂದು ಕರಾವಳಿ ಕಾವಲು ಪಡೆಯ ಕಮಾಂಡರ್‌ ಎಸ್.ಬಿ. ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ರಕ್ಷಣೆ ಮಾಡಿದ ಎಲ್ಲ 9 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು.

ಬೆಳಿಗ್ಗೆಯಿಂದಲೇ ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಂಸದ ನಳಿನ್‌ಕುಮಾರ್ ಕಟೀಲ್, ಜಿಲ್ಲಾ ಉಸ್ತವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹಾಗೂ ಕರಾವಳಿ ಕಾವಲು ಪಡೆ ಕಮಾಂಡರ್‌ ಎಸ್.ಬಿ. ವೆಂಕಟೇಶ್ ಅವರನ್ನು ಭೇಟಿ ಮಾಡಿ, ಚರ್ಚಿಸಿದರು.

ಬಂಡೆಗಳ ನಡುವೆ ಟಗ್‌ ಸಿಲುಕಿಕೊಂಡಿತ್ತು..

ಸಮುದ್ರದ ಪ್ರಕ್ಷುಬ್ಧತೆಯಿಂದ ಕಾಪು ಲೈಟ್‌ಹೌಸ್‌ನಿಂದ ಸುಮಾರು ಐದು ನಾಟಿಕಲ್ ಮೈಲಿ ದೂರದಲ್ಲಿ ಬಂಡೆಗಳ ನಡುವೆ ಟಗ್‌ ಸಿಲುಕಿಕೊಂಡಿತ್ತು.

ADVERTISEMENT
ಸಂಸದರು, ಸಚಿವರು, ಜಿಲ್ಲಾಧಿಕಾರಿ ಹಾಗೂ ಕರಾವಳಿ ಕಾವಲು ಪಡೆಯ ಅಧಿಕಾರಿಗಳ ಸಭೆ

ಕಾರ್ಯಾಚರಣೆಗೂ ಮುನ್ನ ಸಂಸದರು, ಸಚಿವರು, ಜಿಲ್ಲಾಧಿಕಾರಿ ಹಾಗೂ ಕರಾವಳಿ ಕಾವಲು ಪಡೆಯ ಅಧಿಕಾರಿಗಳ ಸಭೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.