ಪುತ್ತೂರು (ದಕ್ಷಿಣ ಕನ್ನಡ): ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ 24 ಹಿಂದೂಗಳ ಹತ್ಯೆ ನಡೆದಿದೆ ಎಂದು ಸುಳ್ಳು ಆರೋಪ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರಸಭೆ ಸದಸ್ಯ ಮೊಹಮ್ಮದ್ ರಿಯಾಜ್ ಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೇ 22ರಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು, ಮುಖ್ಯಮಂತ್ರಿ ವಿರುದ್ಧ ಹೇಳಿಕೆ ನೀಡಿದ್ದಾರೆ. ಈ ಕುರಿತ ವಿಡಿಯೊ ತುಣುಕು ಸಹ ಇದೆ.
ಮುಖ್ಯಮಂತ್ರಿ ವಿರುದ್ಧ ಈ ರೀತಿಯ ಆರೋಪ ಮಾಡಿರುವುದು ಸರಿಯಲ್ಲ. ಆದ್ದರಿಂದ ಹರೀಶ್ ಪೂಂಜ ಅವರನ್ನು ತನಿಖೆ ಮಾಡಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಶನ್ ರೈ ಬನ್ನೂರು, ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮೋನು ಬಪ್ಪಳಿಗೆ ಈ ಸಂದರ್ಭದಲ್ಲಿದ್ದರು.
ಬೆಳ್ತಂಗಡಿ ಠಾಣೆಯೂ ಇದೇ ಮಾದರಿಯ ದೂರು ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.