ADVERTISEMENT

ನಗರದಲ್ಲಿ ಭಾವೈಕ್ಯ ಸಮಾವೇಶ 22ಕ್ಕೆ

ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 7:30 IST
Last Updated 18 ಫೆಬ್ರುವರಿ 2021, 7:30 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ‘ಭಾವೈಕ್ಯತಾ ಸಮಾವೇಶ’ ಫೆ.22ರಂದು ಮಧ್ಯಾಹ್ನ 2:30ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷ ಸಯೀದ್ ಅಹ್ಮದ್, ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ ಖಾದರ್, ಮುಖಂಡರಾದ ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಗಂಗಾಧರ ಗೌಡ, ಐವನ್ ಡಿಸೋಜ, ಜೆ.ಆರ್.ಲೋಬೊ, ಮೊಯ್ದಿನ್ ಬಾವಾ, ವಸಂತ ಬಂಗೇರ, ಶಕುಂತಳಾ ಶೆಟ್ಟಿ, ಡಾ.ರಘು, ಮಿಥುನ್ ರೈ ಪಾಲ್ಗೊಳ್ಳುವರು’ ಎಂದರು.

ಲುಕ್ಮಾನ್ ಬಂಟ್ವಾಳ,ವಿಶ್ವಾಸ್ ‌ಕುಮಾರ್ ದಾಸ್, ಶಶಿಧರ ಹೆಗ್ಡೆ, ರವೂಫ್ ಬಜಾಲ್, ಸಂಶುದ್ದೀನ್ ಕುದ್ರೋಳಿ, ಅಶ್ರಫ್ ಬಜಾಲ್, ಪ್ರಕಾಶ್ ಸಾಲ್ಯಾನ್, ಶಬೀರ್ ಸಿದ್ಧಕಟ್ಟೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.