ADVERTISEMENT

ಕಾಂಗ್ರೆಸ್‌ ಅಭ್ಯರ್ಥಿ ಬದಲಿಸಲು 15 ಬಸ್‌ಗಳಲ್ಲಿ ಬಂದು ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 7:33 IST
Last Updated 29 ಮಾರ್ಚ್ 2023, 7:33 IST
ಮಂಗಳೂರಿನ ಜಿಲ್ಲಾ ಕಾಂಗ್ರೆಸ್  ಕಚೇರಿ ಎದುರು ಪ್ರತಿಭಟನೆ
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ   

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.
'ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’. 'ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ' ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ‌ಎದುರು ಪ್ರತಿಭಟನೆಗೆ ಕುಳಿತಿದ್ದಾರೆ. ಈ ಕುರಿತು ಪಕ್ಷದ ವರಿಷ್ಠರು ನ್ಯಾಯ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.