ಮಂಗಳೂರು: ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೆಂಕಿ ಅವರಿಸಿಕೊಂಡು ಲಾರಿ ಚಾಲಕ ದಹನಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿಬುಧವಾರ ತಡರಾತ್ರಿ ನಡೆದಿದೆ.
ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪ ಮಣ್ಣಗುಡ್ಡ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಲಾರಿಗೆ ಬೆಂಕಿ ಹಿಡಿದಿದ್ದು, ಲಾರಿ ಚಾಲಕ ಹೊರಬರಲಾರದೆದಹನವಾಗಿದ್ದಾರೆ. ಆದರೆ, ಬಸ್ ಪ್ರಯಾಣಿಕರು ತಕ್ಷಣವೇ ಹೊರಬಂದಿದ್ದು ಬಸ್ಸು ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.