ADVERTISEMENT

ಸಂಕಷ್ಟ ಕಾಲದಲ್ಲೂ ಕಾಂಗ್ರೆಸ್‌ ಜನಸೇವೆ

ಪುತ್ತೂರು: ಆಂಬುಲೆನ್ಸ್ ಲೋಕಾರ್ಪಣೆ ಮಾಡಿದ ಮಾಜಿ ಸಚಿವ ರಮಾನಾಥ ರೈ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 2:43 IST
Last Updated 15 ಜೂನ್ 2021, 2:43 IST
ಪುತ್ತೂರಿನಲ್ಲಿ ಆರಂಭಿಸಲಾದ ಆಂಬುಲೆನ್ಸ್ ಸೇವೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಲೋಕಾರ್ಪಣೆ ಮಾಡಿದರು (ಎಡಚಿತ್ರ). ಐವರ್ನಾಡು ಗ್ರಾಮದಲ್ಲಿ ಸಾರ್ವಜನಿಕ ಸೇವೆಗಾಗಿ ನೀಡಲಾದ ಆಂಬುಲೆನ್ಸ್ ಅನ್ನು ಬಂದರು, ಮೀನುಗಾರಿಕಾ ಸಚಿವ ಎಸ್.ಅಂಗಾರ ಉದ್ಘಾಟಿಸಿದರು.
ಪುತ್ತೂರಿನಲ್ಲಿ ಆರಂಭಿಸಲಾದ ಆಂಬುಲೆನ್ಸ್ ಸೇವೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಲೋಕಾರ್ಪಣೆ ಮಾಡಿದರು (ಎಡಚಿತ್ರ). ಐವರ್ನಾಡು ಗ್ರಾಮದಲ್ಲಿ ಸಾರ್ವಜನಿಕ ಸೇವೆಗಾಗಿ ನೀಡಲಾದ ಆಂಬುಲೆನ್ಸ್ ಅನ್ನು ಬಂದರು, ಮೀನುಗಾರಿಕಾ ಸಚಿವ ಎಸ್.ಅಂಗಾರ ಉದ್ಘಾಟಿಸಿದರು.   

ಪುತ್ತೂರು: ‘ಕಾಂಗ್ರೆಸ್ ಪಕ್ಷ ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ. ಅನೇಕ ಸಮಾಜಮುಖಿ ಕಾರ್ಯಗಳ ಮೂಲಕ ನಿರಂತರವಾಗಿ ಜನ ಸೇವೆ ಮಾಡುತ್ತಾ ಬಂದಿರುವ ಪಕ್ಷವಾಗಿದೆ’ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಪುತ್ತೂರು ಬ್ಲಡ್ ಬ್ಯಾಂಕ್ ಬಳಿ ಸೋಮವಾರ ಪುತ್ತೂರು ಬ್ಲಾಕ್ ಯುವಕ ಕಾಂಗ್ರೆಸ್, ಪಂಚಾಯಿತಿ ಶಕ್ತಿ ಒಕ್ಕೂಟ ಹಾಗೂ ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಅವರ ಅಭಿ ಮಾನಿ ಬಳಗದ ವತಿಯಿಂದ ಆರಂಭಿ ಸಲಾದ ಆಂಬುಲೆನ್ಸ್ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮತ್ತು ಧರ್ಮಗುರು ಹುಸೈನ್ ದಾರಿಮಿ ರೆಂಜ ಲಾಡಿ ಮಾತನಾಡಿದರು. ಜಿಲ್ಲಾ ಪಂಚಾ ಯಿತಿ ಮಾಜಿ ಸದಸ್ಯರಾದ ಎಂ.ಎಸ್ ಮಹಮ್ಮದ್, ಅನಿತಾ ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಫಜಲ್ ರಹೀಮ್, ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯ ದರ್ಶಿ ಶೈಲಜಾ ಅಮರನಾಥ್ ಇದ್ದರು.

ADVERTISEMENT

ಪುತ್ತೂರು ಬ್ಲಾಕ್ ಯುವಕ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಸ್ವಾಗತಿಸಿದರು. ಪಂಚಾಯಿತಿ ಶಕ್ತಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಮಲೇಶ್ ಸರ್ವೇದೋಳಗುತ್ತು ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.