ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಗುರುವಾರದಿಂದ ಒಂದು ವಾರದ ಲಾಕ್ ಡೌನ್ ಆರಂಭಗೊಂಡಿದ್ದು, ಬೆಳಿಗ್ಗೆ 8 ರಿಂದ 11 ರತನಕ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಮೊದಲ ದಿನವಾದ ಗುರುವಾರ ಅಗತ್ಯ ಸಾಮಗ್ರಿಗಳ ಅಂಗಡಿ ಮುಂಗಟ್ಟುಗಳು ತೆರೆದಿದ್ದರೂ ಜನ ದಟ್ಟಣೆ ಇರಲಿಲ್ಲ. ನಗರದಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮಳೆ ಸುರಿಯುತ್ತಿತ್ತು. ಮಲ್ಲಿಕಟ್ಟೆ, ಕಂಕನಾಡಿ, ಕೇಂದ್ರ ಮಾರುಕಟ್ಟೆ ಸೇರಿದಂತೆ ನಗರದಲ್ಲಿ ಖರೀದಿ ಭರಾಟೆ ವಿರಳವಾಗಿತ್ತು.
ಪೂರ್ವಭಾವಿಯಾಗಿ ಲಾಕ್ಡೌನ್ ಘೋಷಣೆ, ಪ್ರತಿನಿತ್ಯ ಖರೀದಿಗೆ ಅವಕಾಶ ಹಾಗೂ ಮಳೆಯ ಕಾರಣ ಗ್ರಾಹಕರ ದಟ್ಟಣೆ ಇಲ್ಲ ಎಂದು ವ್ಯಾಪಾರಸ್ಥರು ಅಭಿಪ್ರಾಯ ಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.