ADVERTISEMENT

ಸಾವಿರದ ಗಡಿ ದಾಟಿದ ಸಾವು

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 5:12 IST
Last Updated 18 ಜೂನ್ 2021, 5:12 IST

ಮಂಗಳೂರು: ಜಿಲ್ಲೆಯಲ್ಲಿ ಮೃತಪಟ್ಟ 11 ಜನರಲ್ಲಿ ಕೋವಿಡ್ ಸೋಂಕು ಇರುವುದು ಗುರುವಾರ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ ವರ ಸಂಖ್ಯೆ 1009ಕ್ಕೆ ತಲುಪಿದೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ 7.17ರಷ್ಟಿದೆ.

ಉಡುಪಿ: ಜಿಲ್ಲೆಯಲ್ಲಿ 166 ಜನರಿಗೆ ಗುರುವಾರ ಕೋವಿಡ್ ದೃಢಪಟ್ಟಿದೆ. 316 ಜನರು ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ. 2,406 ಸಕ್ರಿಯ ಪ್ರಕರಣಗಳು ಇವೆ.

ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 416 ಮಂದಿಗೆ ಕೋವಿಡ್ ದೃಢಪಟ್ಟಿದೆ. 580 ಮಂದಿ ಗುಣಮುಖರಾಗಿದ್ದಾರೆ. 3,549 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ಕಪ್ಪು ಶಿಲೀಂಧ್ರ– 3 ಪ್ರಕರಣ ದಾಖಲು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 3 ಕಪ್ಪು ಶಿಲೀಂಧ್ರ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಚಿಕ್ಕಮಗಳೂರು, ದಾವಣ ಗೆರೆ, ಶಿವಮೊಗ್ಗದ ತಲಾ ಒಂದು ಪ್ರಕರಣಗಳು ಇವೆ. ಗುರುವಾರ ನಾಲ್ವರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 39 ಸಕ್ರಿಯ ಪ್ರಕರಣಗಳು ಇವೆ. ಜಿಲ್ಲೆಯ ಎಂಟು ಜನರು ಹಾಗೂ ಇತರ ಜಿಲ್ಲೆಗಳ 31 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.