ಮಂಗಳೂರು: ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುವಾಗ ಇಲ್ಲಿನ ಮಂಗಳಾದೇವಿ ದೇವಾಲಯದ ಆವರಣದಲ್ಲಿ ಮದುವೆ ನಡೆಸಲು ಅನುಮತಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಅದ್ಧೂರಿಯಾಗಿ ನಡೆಯುತ್ತಿರುವ ಸಮಾರಂಭದಲ್ಲಿ ನೂರಾರು ಜನರು ಸೇರಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಬಂದ ದೂರನನ್ವಯ ಉಪ ವಿಭಾಗಾಧಿಕಾರಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿತು.
ಬಿಜೆಪಿ ಸ್ಥಳೀಯ ಪ್ರಮುಖರೊಬ್ಬರ ಮಗಳ ಮದುವೆ ಆಗಿರುವ ಕಾರಣಕ್ಕೆ ಆಡಳಿತ ಮಂಡಳಿ ಅನುಮತಿ ನೀಡಿದೆ ಎನ್ನಲಾಗಿದೆ.
ಅನುಮತಿ ಇರುವ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳನ್ನು ವಶಪಡಿಸಿಕೊಳ್ಳಲು ಉಪ ವಿಭಾಗಾಧಿಕಾರಿ ಸೂಚನೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.