ADVERTISEMENT

ವಿದ್ಯಾರ್ಥಿಗಳಿಂದ ಸಿಪಿಸಿಆರ್‌ಐ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2018, 12:09 IST
Last Updated 20 ಜುಲೈ 2018, 12:09 IST
ಬದಿಯಡ್ಕ ಸಮೀಪದ ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜು ಶಾಲೆಯ ವಿದ್ಯಾರ್ಥಿಗಳು ಈಚೆಗೆ ಕಾಸರಗೋಡಿನ ಸಿಪಿಸಿಆರ್‌ಐ ಸಂಸ್ಥೆಗೆ ಭೇಟಿ ನೀಡಿ ಕೃಷಿ ಕುರಿತ ಮಾಹಿತಿ ಪಡೆದರು. (ಬದಿಯಡ್ಕ ಚಿತ್ರ)
ಬದಿಯಡ್ಕ ಸಮೀಪದ ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜು ಶಾಲೆಯ ವಿದ್ಯಾರ್ಥಿಗಳು ಈಚೆಗೆ ಕಾಸರಗೋಡಿನ ಸಿಪಿಸಿಆರ್‌ಐ ಸಂಸ್ಥೆಗೆ ಭೇಟಿ ನೀಡಿ ಕೃಷಿ ಕುರಿತ ಮಾಹಿತಿ ಪಡೆದರು. (ಬದಿಯಡ್ಕ ಚಿತ್ರ)   

ಬದಿಯಡ್ಕ: ವಿದ್ಯಾರ್ಥಿಗಳಲ್ಲಿ ಕೃಷಿ ಆಸಕ್ತಿ ಮತ್ತು ನವೀನ ತಂತ್ರಜ್ಞಾನಗಳನ್ನು ಬಳಸಿ ಕೃಷಿ ವ್ಯವಸ್ಥೆಗಳನ್ನು ಹೆಚ್ಚು ಸುಲಭಗೊಳಿಸುವ ನಿಟ್ಟಿನಲ್ಲಿ ಪರಿಚಯಾತ್ಮಕ ಮಾಹಿತಿ ಸಂಗ್ರಹದ ಕ್ರಿಯಾತ್ಮಕ ಚಟುವಟಿಕೆಗಳು ಅಗತ್ಯ ಎನ್ನುವುದನ್ನು ಗಮನದಲ್ಲಿಸಿ ಶಾಲೆಗಳಲ್ಲಿ ಕೃಷಿ ಸಂದರ್ಶನ ಚಟುವಟಿಕೆ ಹಮ್ಮಿಕೊಳ್ಳಲಾಗಿತ್ತು.

ಈ ನಿಟ್ಟಿನಲ್ಲಿ ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜಿನ ಹೈಯರ್ ಸೆಕೆಂಡರಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಗಳು ಬುಧವಾರ ಕಾಸರಗೋಡಿನ ಸಿಪಿಸಿಆರ್‌ಐ ಸಂಸ್ಥೆಯನ್ನು ಸಂದರ್ಶಿಸಿದರು.

ಸಿಪಿಸಿಆರ್‌ಐ ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ಮುರಳೀಕೃಷ್ಣ ಕಿಳಿಂಗಾರು ವಿದ್ಯಾರ್ಥಿಗಳಿಗೆ ಟಿಶ್ಯೂ ಕಲ್ಚರ್ ಕುರಿತು ಮತ್ತು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿ ಮಣಿಕಂಠನ್ ಕಸಿ ಕಟ್ಟುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಅಂಗಾಂಶ ಕೃಷಿ (ಟಿಶ್ಯೂ ಕಲ್ಚರ್) ಮತ್ತು ಕಸಿಕಟ್ಟುವಿಕೆಯ ಸೂಕ್ಷ್ಮಗಳನ್ನು ಅರ್ಥ ಮಾಡಿಸುವಲ್ಲಿ ವಿದ್ಯಾರ್ಥಿಗಳು ಅಧಿಕಾರಿಗಳಲ್ಲಿ ಪ್ರಶ್ನೆಗಳನ್ನು ಕೇಳಿ ತಮ್ಮ ಅರಿವಿನ ವಿಸ್ತಾರವನ್ನು ಹೆಚ್ಚಿಸಿಕೊಂಡರು.

ADVERTISEMENT

ಶಿಕ್ಷಕರಾದ ಕೆ. ಗೋವಿಂದ ಶರ್ಮ, ಜ್ಯೋತಿಲಕ್ಷ್ಮಿ ಎಸ್, ಅವಿನಾಶ ಕಾರಂತ ಎಂ., ಶೋಭಾ ಕೆ ಹಿರೇಮಠ್ ನೇತೃತ್ವ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.