ADVERTISEMENT

ಉಳ್ಳಾಲ: ಸಿಪಿಎಂ ಮುಖಂಡ ನಿಧನ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2024, 15:12 IST
Last Updated 13 ಫೆಬ್ರುವರಿ 2024, 15:12 IST
ನಾರಾಯಣ ತಲಪಾಡಿ
ನಾರಾಯಣ ತಲಪಾಡಿ   

ಉಳ್ಳಾಲ: ಸಿಪಿಎಂ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ (68) ಹೃದಯಾಘಾತದಿಂದ ಮಂಗಳವಾರ ನಿಧನರಾದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿದ್ದ ಅವರು ವಾಪಸಾಗುವಾಗ ಹೃದಯಾಘಾತ ಉಂಟಾಗಿದೆ.

ಸಿಪಿಎಂ, ದಲಿತ ಹಕ್ಕುಗಳ ಹೋರಾಟ, ಬೀಡಿ ಲೇಬರ್ ಯೂನಿಯನ್, ಕೆಪಿಆರ್‌ಎಸ್ ರೈತ ಸಂಘ, ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ತೊಡಗಿಸಿಕೊಂಡಿದ್ದರು. ತಲಪಾಡಿ ಭಾಗದಲ್ಲಿ ಕೊರಗಜ್ಜನ ಪಾತ್ರಿಯಾಗಿಯೂ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದರು. ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT