ಮಂಗಳೂರು: ಗಾಂಜಾ ಸಾಗಾಟ ಜಾಲವನ್ನು ಶುಕ್ರವಾರ ಭೇದಿಸಿರುವ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿ, 5.73 ಲಕ್ಷ ವೌಲ್ಯದ ಸೊತ್ತನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ನಿವಾಸಿಗಳಾದ ಇಬ್ರಾಹಿಂ ಮಡನ್ನೂರು, ಅಬ್ದುಲ್ ನಿಜಾದ್ ಬಂಧಿತರು.
ನಗರದ ಪಡೀಲ್ ಜಂಕ್ಷನ್ನಿಂದ ಬಿಕರ್ನಕಟ್ಟೆಗೆ ಸಂಚರಿಸುವ ರಸ್ತೆಯಲ್ಲಿ ಪಡುಮರೋಳಿಯ ದೇವಸ್ಥಾನವೊಂದರ ದ್ವಾರ ಬಳಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ವಾಹನ ತಡೆಗಟ್ಟಿ ಸೊತ್ತು ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ₹3.60 ಲಕ್ಷ ವೌಲ್ಯದ 24 ಕೆ.ಜಿ. ಗಾಂಜಾ, ಎರಡು ಲಕ್ಷ ವೌಲ್ಯದ ಟೂರಿಸ್ಟ್ ಕಾರು ಹಾಗೂ ₹13 ಸಾವಿರ ವೌಲ್ಯದ ಮೂರು ಮೊಬೈಲ್ಗಳು ವಶಕ್ಕೆ ಪಡೆಯಲಾಗಿದೆ. ಸ್ವಾಧೀನ ಪಡಿಸಿಕೊಳ್ಳಲಾದ ಸೊತ್ತಿನ ಒಟ್ಟು ವೌಲ್ಯ ₹5.73 ಲಕ್ಷ ಎಂದು ಅಂದಾಜಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.