ADVERTISEMENT

ಮಂಗಳೂರು: ಹೆಲ್ಮೆಟ್ ಧರಿಸಿ ಬಸ್ ಮೇಲೆ ಕಲ್ಲು ತೂರಾಟ -ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2019, 9:18 IST
Last Updated 6 ಸೆಪ್ಟೆಂಬರ್ 2019, 9:18 IST
ಮಹೇನ್ ಅಬ್ದುಲ್ ರಹಮಾನ್ ಹಾಗೂ ಕುದ್ರೋಳಿ ನಿವಾಸಿ ಅಬ್ದುಲ್ ಮನ್ನಾನ್
ಮಹೇನ್ ಅಬ್ದುಲ್ ರಹಮಾನ್ ಹಾಗೂ ಕುದ್ರೋಳಿ ನಿವಾಸಿ ಅಬ್ದುಲ್ ಮನ್ನಾನ್   

ಮಂಗಳೂರು: ನಗರದ ಮೂರು ಸ್ಥಳಗಳಲ್ಲಿ ಬುಧವಾರ ಬೆಳಿಗ್ಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ ಆರೋಪದ ಮೇಲೆ ಇಬ್ಬರನ್ನು ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಜೆಪ್ಪು ನಿವಾಸಿ ಮಹೇನ್ ಅಬ್ದುಲ್ ರಹಮಾನ್ (18) ಮತ್ತು ಕುದ್ರೋಳಿ ನಿವಾಸಿ ಅಬ್ದುಲ್ ಮನ್ನಾನ್ (21) ಬಂಧಿತರು.

ಹೆಲ್ಮೆಟ್ ಧರಿಸಿಕೊಂಡು ಬೈಕ್‌ನಲ್ಲಿ ಬಂದು ಕೃತ್ಯ ಎಸಗಿದ್ದರು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.

ADVERTISEMENT

ನಗರದ ಬಿಜೈನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಒಂದು ಬಸ್ ಮತ್ತು ಫಳ್ನೀರ್ ಹಾಗೂ ನಂದಿಗುಡ್ಡೆಯಲ್ಲಿ ತಲಾ ಒಂದು ಖಾಸಗಿ ಬಸ್ ಗಳ ಮೇಲೆ ಆರೋಪಿಗಳು ಕಲ್ಲು ತೂರಿದ್ದರು. ಇಬ್ಬರೂ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಬೆಂಬಲಿಗರಾಗಿದ್ದಾರೆ.

ಶಿವಕುಮಾರ್ ಅವರ ಬಂಧನ ವಿರೋಧಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ ಎಂದು ಗೊತ್ತಾಗಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.