ಉಳ್ಳಾಲ: ಸಮೀಪದ ತೊಕ್ಕೊಟ್ಟುವಿನಲ್ಲಿ ಶನಿವಾರ ರಾತ್ರಿ ಕರ್ಫ್ಯೂ ನಡುವೆಯೇ ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಯುವಕನೊಬ್ಬನಿಗೆ ಚೂರಿ ಇರಿದು ಪರಾರಿಯಾಗಿದ್ದಾರೆ.
ತೊಕ್ಕೊಟ್ಟು ನಿವಾಸಿ ನಿಖಿಲ್ ಕೋಟ್ಯಾನ್ (33) ಗಾಯಗೊಂಡಿರುವ ಯುವಕ. ರಾಷ್ಟ್ರೀಯ ಹೆದ್ದಾರಿ 66ರಿಂದ ಸಂಪರ್ಕ ಕಲ್ಪಿಸುವ ತೊಕ್ಕೊಟ್ಟು ಅಂಬಿಕಾ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ನಿಖಿಲ್ ಅವರ ಹೊಟ್ಟೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳುವನ್ನು ದೇರಳಕಟ್ಟೆಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.