ಉಳ್ಳಾಲ: ಮನೆ ಆವರಣದಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳು ಹಾಗೂ ಮನೆ ಕಿಟಕಿ ಗಾಜಿಗೆ ಕಲ್ಲುಗಳನ್ನು ಎಸೆದು ದುಷ್ಕರ್ಮಿಗಳು ಹಾನಿಗೊಳಿಸಿರುವ ಘಟನೆ ನರಿಂಗಾನ ಪಂಚಾಯಿತಿ ವ್ಯಾಪ್ತಿಯ ಜಲ್ಲಿಕ್ರಾಸ್ ಬಳಿ ಗುರುವಾರ ನಸುಕಿನ ಜಾವ ನಡೆದಿದೆ.
ಜಲ್ಲಿಕ್ರಾಸ್ ನಿವಾಸಿ ಅಬ್ಬಾಸ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ನಸುಕು 3.30 ರ ಸುಮಾರಿಗೆ ಅಂಗಳದಲ್ಲಿ ಸದ್ದು ಕೇಳಿ ಮನೆಮಂದಿ ಹೊರಬಂದಾಗ ಅಂಗಳದಲ್ಲಿ ನಿಲ್ಲಿಸಲಾದ ಆಮ್ನಿ ಕಾರು ಮತ್ತು ಕ್ವಾಲಿಸ್ ವಾಹನದ ಗಾಜುಗಳನ್ನು ಸಂಪೂರ್ಣ ಹಾನಿಗೊಳಿಸಲಾಗಿದೆ.
ಮನೆಯ ಕಿಟಿಕಿ ಗಾಜನ್ನೂ ಹಾನಿಗೊಳಿಸಲಾಗಿದೆ. ರೇಷನ್ ಅಂಗಡಿ ಹೊಂದಿರುವ ಅಬ್ಬಾಸ್ ಅವರಿಗೆ ಯಾರ ಜತೆಯೂ ವೈಷಮ್ಯವಿರಲಿಲ್ಲ. ಘಟನೆಗೆ ಕಾರಣವೂ ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿದ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.