ADVERTISEMENT

ಸುಬ್ರಹ್ಮಣ್ಯ | ‘ಕಲೆ, ಸಂಸ್ಕೃತಿಯ ಜ್ಞಾನ ಔನ್ನತ್ಯಕ್ಕೆ ಬುನಾದಿ’

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 8:32 IST
Last Updated 30 ಡಿಸೆಂಬರ್ 2025, 8:32 IST
ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು 
ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು    

ಸುಬ್ರಹ್ಮಣ್ಯ: ಕಲೆ ಮತ್ತು ಸಂಸ್ಕೃತಿಯ ಜ್ಞಾನವು ಭವಿಷ್ಯದ ಔನತ್ಯಕ್ಕೆ ಬುನಾದಿಯಾಗುತ್ತದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಆಶ್ರಯದಲ್ಲಿ ಸೋಮವಾರ ಎಸ್ಎಸ್‌ಪಿಯು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ಪಂಚ ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜೇಶ್ ಎನ್.ಎಸ್, ಸದಸ್ಯ ವೆಂಕಟೇಶ್ ಎಚ್ ಎಲ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ನಂದಾ ಹರೀಶ್, ಸಮಾಜಸೇವಾ ಟ್ರಸ್ಟ್ ಅಧ್ಯಕ್ಷ ರವಿ ಕಕ್ಕೆಪದವು, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಪೈ, ಶಾಲಾ ಮುಖ್ಯ ಗುರು ಮಾಧವ ಮೂಕಮಲೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ದ ಶೇಷಕುಮಾರ್ ಶೆಟ್ಟಿ, ವಿದ್ಯಾರ್ಥಿ ನಾಯಕ ಶ್ರೀಶು, ವಾರ್ಷಿಕೋತ್ಸವ ಸಮಿತಿ ಗೌರವಾಧ್ಯಕ್ಷ ಜಯಂತ್ ದೇವರಗದ್ದೆ, ಜೊತೆ ಕಾರ್ಯದರ್ಶಿ ವಿನೋದಾ ಟೀಚರ್ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.