ಮಂಗಳೂರು: ಈಗ ಜಾರಿಯಲ್ಲಿರುವ ಲಾಕ್ಡೌನ್ ಅವಧಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಂದು ಘಟಕವಾಗಿ ಪರಿಗಣಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ದಿನಗಳಲ್ಲಿ ಹಗಲಿನ ವೇಳೆ ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಚಲಿಸುವ ಉದ್ದೇಶದಿಂದ ಒಂದೇ ಘಟಕವಾಗಿ ಪರಿಗಣಿಸಲಾಗುವುದು. ವ್ಯಕ್ತಿಗಳು ಕೆಲಸ ಮಾಡುತ್ತಿರುವ ಕಂಪನಿ, ಸಂಸ್ಥೆಗಳಿಂದ ನೀಡಲಾಗುವ ಪತ್ರದ ಮೇರೆಗೆ ಮತ್ತು ಕಂಪನಿ,ಸಂಸ್ಥೆಯ ಅಧಿಕೃತ ಗುರುತಿನ ಚೀಟಿಯೊಂದಿಗೆ ಮಾತ್ರ ಚಲನವಲನಗಳಿಗೆ ಅನುಮತಿಸಿದೆ. ಆದ್ದರಿಂದ ಈ ಜಿಲ್ಲೆಗಳಲ್ಲಿ ಚಲನೆಗೆ ಬೇರೆ ಯಾವುದೇ ಅಂತರ್ ಜಿಲ್ಲಾ ಪಾಸ್ಗಳ ಅವಶ್ಯಕತೆ ಇರುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಆದರೆ, ಇತರೆ ಜಿಲ್ಲೆಗಳಿಗೆ ಅನುಮತಿಸಲಾದ ಚಟುವಟಿಕೆಗಳಿಗೆ ಅಂತರ ಜಿಲ್ಲೆಗಳ ಸಂಚಾರಕ್ಕೆ ಪಾಸ್ ಅಗತ್ಯವಿರುತ್ತದೆ ಎಂದು ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.