ADVERTISEMENT

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ. ಎಲ್‌ ರಾಹುಲ್ ಭೇಟಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2023, 14:48 IST
Last Updated 25 ಜೂನ್ 2023, 14:48 IST
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ ಹೊಸಳಿಗಮ್ಮನ ದರ್ಶನ ಪಡೆದರು
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ ಹೊಸಳಿಗಮ್ಮನ ದರ್ಶನ ಪಡೆದರು   

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಭಾರತ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್.ರಾಹುಲ್ ಸ್ನೇಹಿತರೊಂದಿಗೆ ಭೇಟಿ ನೀಡಿದರು.

ದೇವರ ದರ್ಶನ ಪಡೆದು ಸೇವೆ ನೆರವೇರಿಸಿ ಪ್ರಸಾದ ಸ್ವೀಕರಿಸಿದರು.

ದೇವಳದ ಅರ್ಚಕರು ರಾಹುಲ್ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.

ADVERTISEMENT

ಹೊಸಳಿಗಮ್ಮನ ದರ್ಶನ ಪಡೆದರು.

ಆಡಳಿತ ಕಚೇರಿಗೆ ಭೇಟಿ ನೀಡಿದ ರಾಹುಲ್ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಗೌರವಿಸಿದರು.

ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್. ಮತ್ತು ರಾಹುಲ್ ಅವರ ಸ್ನೇಹಿತರು ಉಪಸ್ಥಿತರಿದ್ದರು.

ಶ್ರೀ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಿಂದ ಸನ್ಮಾನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.