ಪುತ್ತೂರು (ದಕ್ಷಿಣ ಕನ್ನಡ):ತಾಲ್ಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ಕೃಷಿಕ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಬ್ರಹ್ಮಣ್ಯ ಭಟ್ (84) - ಶಾರದಾಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇಬ್ಬರೂಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ, ಅವರ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು.
ಪುತ್ರ ಸೋಮವಾರ ಬೆಳಿಗ್ಗೆಎದ್ದುನೋಡಿದಾಗದಂಪತಿ ಪ್ರತ್ಯೇಕ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದುಕಂಡು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.