ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಇಳಿಮುಖ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 10:27 IST
Last Updated 1 ಜುಲೈ 2022, 10:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ದಿನವಿಡೀ ಸುರಿದ ಮಳೆಯ ಅಬ್ಬರ ಶುಕ್ರವಾರ ತುಸು ಕಡಿಮೆಯಾಗಿದೆ. ಗುರುವಾರ ಉಕ್ಕಿ ಹರಿದಿದ್ದ ಹಳ್ಳಕೊಳ್ಳಗಳಲ್ಲೂ ನೀರಿನ ಹರಿವಿನ ಪ್ರಮಾಣ ಕಡಿಮೆ ಇತ್ತು. ನೇತ್ರಾವತಿ, ಫಲ್ಗುಣಿ, ನದಿಗಳು ತುಂಬಿ ಹರಿಯುತ್ತಿವೆ.

ಜುಲೈ 6ರವರೆಗೂ ನಿತ್ಯವೂ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆಯ ಮುನ್ಸೂಚನೆ ಇದ್ದುದರಿಂದ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಇತ್ತು. ಪಡೀಲ್‌–ಕಣ್ಣೂರಿನ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರದೇಶದಲ್ಲಿ ಹಾಗೂ ಕೊಟ್ಟಾರ ಚೌಕಿ ಬಳಿ ಉಂಟಾಗಿದ್ದ ಪ್ರವಾಹವು ತಗ್ಗಿದೆ.

ADVERTISEMENT

ಶುಕ್ರವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮೇರಮಜಲುವಿನಲ್ಲಿ 158 ಮಿ.ಮೀ ಹಾಗೂ ಫಜೀರುವಿನಲ್ಲಿ 144 ಮಿ.ಮೀ, ಮೂಡುಬಿದಿರೆಯಲ್ಲಿ 139 ಮಿ.ಮೀ ಮಳೆ ದಾಖಲಾಗಿದೆ.

ಭಾರಿ ಮಳೆಯಿಂದಾಗಿ ಕಡಬದಲ್ಲಿ ಒಂದು ಮನೆ ಹಾನಿಗೊಂಡಿದೆ. ಮಂಗಳೂರು ಹಾಗೂ ಮೂಲ್ಕಿಯಲ್ಲಿ ತಲಾ ಒಂದು ಮನೆ ಭಾಗಶಃ ಹಾನಿಗೊಳಗಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.