ADVERTISEMENT

ದಕ್ಷಿಣ ಕನ್ನಡ: ಈಶ್ವರಮಂಗಲ ಬಳಿ ಮನೆಯ ಕೊಟ್ಟಿಗೆ ‌ಚಾವಣಿ ಮೇಲೆ‌ ಉರುಳಿದ ಬಸ್

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 8:33 IST
Last Updated 10 ಜೂನ್ 2020, 8:33 IST
ಮನೆಯೊಂದರ ಕೊಟ್ಟಿಗೆಯ ಮೇಲ್ಚಾವಣಿ ಮೇಲೆ ಬಿದ್ದಿರುವ ಕೆಎಸ್‌ಆರ್‌ಟಿಸಿ ಬಸ್
ಮನೆಯೊಂದರ ಕೊಟ್ಟಿಗೆಯ ಮೇಲ್ಚಾವಣಿ ಮೇಲೆ ಬಿದ್ದಿರುವ ಕೆಎಸ್‌ಆರ್‌ಟಿಸಿ ಬಸ್   

ಮಂಗಳೂರು: ಪುತ್ತೂರಿನಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಈಶ್ವರಮಂಗಲದ ಸಮೀಪ ಸಾಂತ್ಯ ಎಂಬಲ್ಲಿ ಚಾಲಕ ನಿಯಂತ್ರಣ ತಪ್ಪಿ ಮನೆಯೊಂದರ ಕೊಟ್ಟಿಗೆಯ ಮೇಲ್ಚಾವಣಿ ಮೇಲೆ ಬಿದ್ದಿದೆ.‌

ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಅಲ್ಪ ಸ್ವಲ್ಪ ಗಾಯವಾಗಿದೆ. ಉಳಿದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಈಶ್ವರಮಂಗಲದ ಸಾಂತ್ಯ ಎಂಬಲ್ಲಿನ ತಿರುವಿನಲ್ಲಿ ಈ ಬುಧವಾರ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್ ಉರುಳಿ ಬಿದ್ದಿದೆ. ಸುಮಾರು 20 ಅಡಿಯಷ್ಟು ಕೆಳಗಿರುವ ಮನೆಯ ಕೊಟ್ಟಿಗೆಯ ಚಾವಣಿಯ ಮೇಲೆ ಸರಕಾರಿ ಬಸ್ ಉರುಳಿ ಬಿದ್ದಿದೆ.

ADVERTISEMENT

ಬಸ್ ಉರುಳಿ ಬಿದ್ದ ಜಾಗದಲ್ಲಿ ಮನೆಮಂದಿ ಯಾರೂ ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಕೋವಿಡ್ ಕಳವಳದ ಕಾರಣ ಬಸ್ ನಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇರಲಿಲ್ಲ ಎನ್ನಲಾಗಿದೆ. ಸದ್ಯ ಬಸ್ ಮೇಲೆತ್ತುವ ಕಾರ್ಯಾಚರಣೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.