ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಅರುಣೋದಯ ಯುವಕ ಮಂಡಲದ ವತಿಯಿಂದ ಆಟಿಡೊಂಜಿ ಕೆಸರ್ದ ಕೂಟ ಆ.14ರಂದು ಮರೋಡಿ ಬೊವೂರಿ ಜಯಪೂಜಾರಿ ಅವರ ಗದ್ದೆಯಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ 9ಕ್ಕೆ ಶಾಸಕ ಹರೀಶ್ ಪೂಂಜ ಕೂಟಕ್ಕೆ ಚಾಲನೆ ನೀಡುವರು. ಯುವಕ ಮಂಡಲದ ಗೌರವಾಧ್ಯಕ್ಷ ಜಯಂತ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಸಂಜೆ ಯುವಕ ಮಂಡಲದ ಅಧ್ಯಕ್ಷ ನವೀನ್ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಪುರುಷರಿಗೆ ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ, ಗೋವಿಂದ ಸ್ಪರ್ಧೆ, ಮೂರು ಕಾಲಿನ ಓಟ, ಉಪ್ಪಿನ ಮೂಟೆ, ಮಹಿಳೆಯರಿಗೆ ಥ್ರೋಬಾಲ್, ಹಗ್ಗಜಗ್ಗಾಟ, ಮಡಕೆ ಒಡೆಯುವುದು, ಹಾಲೆ ಓಟ, 100 ಮೀಟರ್ ಓಟ, ಮಕ್ಕಳಿಗೆ ಮಡಕೆ ಒಡೆಯುವುದು, ಕಬಡ್ಡಿ, ಉಪ್ಪಿನಮೂಟೆ ಓಟ, ಹಾಲೆ ಓಟ, 100 ಮೀಟರ್ ಓಟ, ಹಿರಿಯ ನಾಗರಿಕರಿಗೆ ವೇಗದ ನಡಿಗೆ, ಪಾಡ್ದನ, ಇನ್ನಿತರ ಜನಪದ ಕ್ರೀಡೆಗಳು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 7338172976, 9008455724 ಸಂಪರ್ಕಿಸಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.