ADVERTISEMENT

ಜೈನ ಮುನಿಗಳ ಹತ್ಯೆ: ವೀರೇಂದ್ರ ಹೆಗ್ಗಡೆ ಸಂತಾಪ

​ಪ್ರಜಾವಾಣಿ ವಾರ್ತೆ
Published 9 ಜುಲೈ 2023, 14:18 IST
Last Updated 9 ಜುಲೈ 2023, 14:18 IST
   

ಉಜಿರೆ: ಚಿಕ್ಕೋಡಿಯ ಕಾಮಕುಮಾರ ನಂದಿ ಮುನಿಮಹಾರಾಜರ ಹತ್ಯೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಖೇದ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ದಿಗಂಬರ ಮುನಿಗಳ ಹತ್ಯೆಯಾಗಿರುವುದು ಇದೇ ಮೊದಲು. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಹೆಗ್ಗಡೆಯವರು ಅಭಿನಂದಿಸಿದ್ದಾರೆ.

ಕಾರ್ಕಳ, ಮೂಡುಬಿದಿರೆ, ನರಸಿಂಹರಾಜಪುರ ಮತ್ತು ಹೊಂಬುಜ ಜೈನಮಠದ ಭಟ್ಟಾರಕರೂ ಕೃತ್ಯದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹತ್ಯೆಯನ್ನು ಖಂಡಿಸಿದ್ದಾರೆ.

1

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.