ADVERTISEMENT

ಅಪಾಯಕಾರಿ ವಿದ್ಯುತ್ ಪರಿವರ್ತಕ

​ಪ್ರಜಾವಾಣಿ ವಾರ್ತೆ
Published 10 ಜುಲೈ 2018, 10:50 IST
Last Updated 10 ಜುಲೈ 2018, 10:50 IST

ಬದಿಯಡ್ಕ : ಕರಿಂಬಿಲದಲ್ಲಿ ವಿದ್ಯುತ್ ಪರಿವರ್ತಕವೊಂದು ಆವರಣ ಬೇಲಿಯಿಲ್ಲದೆ, ಅಪಾಯಸೂಚಕ ಫಲಕವೂ ಇಲ್ಲದೆ ಇರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.

ಈ ಪ್ರದೇಶದಲ್ಲೇ ಬಸ್ ತಂಗುದಾಣವಿದ್ದು, ಮಕ್ಕಳು ಹಾಗೂ ಮಹಿಳೆಯರೂ ಸೇರಿದಂತೆ ನೂರಾರು ಮಂದಿ ಬಸ್ಸಿಗಾಗಿ ಕಾದಿರುತ್ತಾರೆ. ಈ ಪರಿವರ್ತಕದ ಫ್ಯೂಸ್‌ಗಳಿಗೆ ಕವಚಗಳಿಲ್ಲದಿರುವುದರಿಂದ ಮಳೆಗಾಲದಲ್ಲಿ ಅಪಾಯ ಹೆಚ್ಚಿದೆ. ಸಿಡಿಲಿನ ಸಂದರ್ಭದಲ್ಲಿ ಈ ವಿದ್ಯುತ್ ಪರಿವರ್ತಕದಿಂದ ಬೆಂಕಿ ಏಳುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೂಡಲೇ ಅಧಿಕಾರಿಗಳು ಸೂಕ್ತ ಸುರಕ್ಷತೆಯ ವ್ಯವಸ್ಥೆಗಳನ್ನು ಏರ್ಪಡಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.