ಬದಿಯಡ್ಕ : ಕರಿಂಬಿಲದಲ್ಲಿ ವಿದ್ಯುತ್ ಪರಿವರ್ತಕವೊಂದು ಆವರಣ ಬೇಲಿಯಿಲ್ಲದೆ, ಅಪಾಯಸೂಚಕ ಫಲಕವೂ ಇಲ್ಲದೆ ಇರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.
ಈ ಪ್ರದೇಶದಲ್ಲೇ ಬಸ್ ತಂಗುದಾಣವಿದ್ದು, ಮಕ್ಕಳು ಹಾಗೂ ಮಹಿಳೆಯರೂ ಸೇರಿದಂತೆ ನೂರಾರು ಮಂದಿ ಬಸ್ಸಿಗಾಗಿ ಕಾದಿರುತ್ತಾರೆ. ಈ ಪರಿವರ್ತಕದ ಫ್ಯೂಸ್ಗಳಿಗೆ ಕವಚಗಳಿಲ್ಲದಿರುವುದರಿಂದ ಮಳೆಗಾಲದಲ್ಲಿ ಅಪಾಯ ಹೆಚ್ಚಿದೆ. ಸಿಡಿಲಿನ ಸಂದರ್ಭದಲ್ಲಿ ಈ ವಿದ್ಯುತ್ ಪರಿವರ್ತಕದಿಂದ ಬೆಂಕಿ ಏಳುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೂಡಲೇ ಅಧಿಕಾರಿಗಳು ಸೂಕ್ತ ಸುರಕ್ಷತೆಯ ವ್ಯವಸ್ಥೆಗಳನ್ನು ಏರ್ಪಡಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.