ADVERTISEMENT

ಕುವೈಟ್‌ನಲ್ಲಿ ಮೃತಪಟ್ಟಿದ್ದ ಕಾರ್ಮಿಕನ ಮೃತದೇಹ ಬುಧವಾರ ನಗರಕ್ಕೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 8:53 IST
Last Updated 17 ಜೂನ್ 2020, 8:53 IST

ಮಂಗಳೂರು: ಕುವೈಟ್‌ನಲ್ಲಿ ಭಾನುವಾರ ಸಂಭವಿಸಿದ ಅಗ್ನಿ ದುರ್ಘಟನೆಯಲ್ಲಿ ಮೃತಪಟ್ಟ ನಗರದ ಪಡೀಲ್-ಕೊಡಕ್ಕಲ್‌ನ ಸತೀಶ್ ಕೋಚು ಶೆಟ್ಟಿ(45) ಪಾರ್ಥೀವ ಶರೀರ ಬುಧವಾರ ನಗರಕ್ಕೆ ಆಗಮಿಸಲಿದೆ.

ಅವರು ಅಲ್-ಸಬ್ರಿಯಾ ರಿಫೈನರಿ ಆಯಿಲ್ ಆ್ಯಂಡ್ ಗ್ಯಾಸ್ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೂನ್‌ 14ರಂದು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಅನಿಲ ಬಿಡುಗಡೆಯಾಗಿ ಅಗ್ನಿ ಅವಘಡ ಸಂಭವಿಸಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೃತಪಟ್ಟಿದ್ದರು.

ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಷನ್‌ನ ಮ್ಯಾಗ್ನೆಟ್ ತಂಡದ ಪ್ರಯತ್ನದಿಂದ ಮೃತದೇಹ ಅಲ್ ಜಝೀರಾ ವಿಮಾನದಲ್ಲಿ ಬರಲಿದೆ ಎಂದು ಸಂಘಟನೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.