ಉಜಿರೆ: ಕಳೆಂಜ ಗ್ರಾಮದ ಮಾಣಿಂಗೇರಿ ಕೂಟೇಲು ಎಂಬಲ್ಲಿ ಭಾನುವಾರ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಕೊಯ್ಯೂರು ಗ್ರಾಮದ ನಿವಾಸಿ ಥಾಮಸ್ ಎಂಬುವರ ಮಗ ಶಿಬಿನ್ (19) ಮೃತಪಟ್ಟ ಯುವಕ.
ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದ ಈತ ಗೆಳೆಯರ ಜತೆ ಈಜಲು ಹೋಗಿದ್ದ. ನದಿಯಲ್ಲಿ ಆತನ ಶವ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.