ಮಂಗಳೂರು: ಕಕ್ಷಿದಾರರಿಗೂ ವಕೀಲರಿಗೂ ಅನುಕೂಲ ಆಗುವ ಹೈಕೋರ್ಟ್ ಪೀಠ ಮಂಗಳೂರಿನಲ್ಲಿ ಸ್ಥಾಪನೆ ಮಾಡಲು ಪ್ರಯತ್ನಿಸುವಂತೆ ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರನ್ನು ಕೋರಲಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಮನೋರಾಜ್ ತಿಳಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತ್ಯತೀತ ತತ್ವದಲ್ಲಿ ನಂಬಿಕೆ ಇರುವ ವಕೀಲರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದ್ದು ವಕೀಲರಿಗೆ ಅನುಕೂಲಕರ ವಾತಾವರಣ ನಿರ್ಮಿಸಿಕೊಡುವಂತೆ ಲೋಬೊ ಅವರನ್ನು ಕೋರಲಾಗಿದೆ ಎಂದು ತಿಳಿಸಿದರು.
ಯುವ ವಕೀಲರ ಅಭ್ಯಾಸಕ್ಕೆ ಅನುಕೂಲ ಆಗುವಂತೆ ವಕೀಲರ ಸಂಘದಲ್ಲಿ ಚೇಂಬರ್ಸ್ ಆರಂಭಿಸಬೇಕು, ಕ್ಯಾಂಟೀನ್ ನಿರ್ಮಿಸುವುದಕ್ಕೂ ಮುಂದಾಗಬೇಕು ಎಂದು ಅಭ್ಯರ್ಥಿಯನ್ನು ಕೋರಲಾಗಿದೆ ಎಂದು ಅವರು ತಿಳಿಸಿದರು.
ಜೆ.ಆರ್.ಲೋಬೊ, ಮಾಜಿ ಶಾಸಕ ಐವನ್ ಡಿ ಸೋಜ, ಕಳ್ಳಿಗೆ ತಾರಾನಾಥ ಶೆಟ್ಟಿ, ಬಿ.ಇಬ್ರಾಹಿಂ, ಎಂ.ಪಿ.ಶೆಣೈ, ನಾರಾಯಣ ಪೂಜಾರಿ, ಯಶವಂತ್ ಮತ್ತು ಎ.ಸಿ.ಜಯರಾಜ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.