ADVERTISEMENT

ಡಿಸಿ ಕಚೇರಿಯಲ್ಲಿ ಡೆಂಗಿ ಜಾಗೃತಿ

​ಪ್ರಜಾವಾಣಿ ವಾರ್ತೆ
Published 16 ಮೇ 2022, 15:33 IST
Last Updated 16 ಮೇ 2022, 15:33 IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ತಗ್ಗು ಪ್ರದೇಶಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪರಿಶೀಲಿಸಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ತಗ್ಗು ಪ್ರದೇಶಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪರಿಶೀಲಿಸಿದರು.   

ಮಂಗಳೂರು: ರಾಷ್ಟ್ರೀಯ ಡೆಂಗಿ ದಿನದ ಅಂಗವಾಗಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ 100ಕ್ಕೂ ಅಧಿಕ ಕಚೇರಿ ಸಿಬ್ಬಂದಿಗೆ ಡೆಂಗಿ ಮತ್ತು ಮಲೇರಿಯಾ ಕುರಿತಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಜಾಗೃತಿ ಮೂಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ವಿವಿಧ ಇಲಾಖೆಗಳ ಸಿಬ್ಬಂದಿ, ಕಚೇರಿ ಆವರಣದ ಸುತ್ತಮುತ್ತ ಮಳೆ ನೀರು ಸಂಗ್ರಹವಾಗುವ ಸ್ಥಳಗಳ ಸ್ವಚ್ಛತೆ, ನೀರಿನ ಬಾಟಲಿಗಳು (ಪ್ಲಾಸ್ಟಿಕ್), ಹಸಿ ಕಸಗಳನ್ನು ಆಯ್ದು ತೆಗೆಯುವ ಮೂಲಕ ಸ್ವಚ್ಛಗೊಳಿಸಿದರು.

ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸುವ ಮೂಲಕ ಡೆಂಗಿ ಮತ್ತು ಮಲೇರಿಯಾ ನಿಯಂತ್ರಣಕ್ಕೆ ಕೈಜೋಡಿಸುವಂತೆ ಜಿಲ್ಲಾಡಳಿತದಿಂದ ವಿನಂತಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.