ADVERTISEMENT

ಮಂಗಳೂರು: ತಾಯಿ ರಕ್ಷಿಸಿದ ಪುತ್ರಿಗೆ ಜಿಲ್ಲಾಧಿಕಾರಿ ಸನ್ಮಾನ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 16:12 IST
Last Updated 10 ಸೆಪ್ಟೆಂಬರ್ 2024, 16:12 IST
ತಾಯಿಯನ್ನು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸನ್ಮಾನಿಸಿದರು
ತಾಯಿಯನ್ನು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸನ್ಮಾನಿಸಿದರು   

ಮಂಗಳೂರು: ಕಿನ್ನಿಗೋಳಿಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿ ಹೊಡೆದು ಬಿದ್ದಿದ್ದು, ತಾಯಿ ರಿಕ್ಷಾದ ಅಡಿಯಲ್ಲಿ ಸಿಲುಕಿದ್ದನ್ನು ಕಂಡ ಪುತ್ರಿ ವೈಭವಿ, ತಕ್ಷಣ ಓಡಿ ಬಂದು ತಾಯಿಯನ್ನು ರಕ್ಷಣೆ ಮಾಡಿದ್ದಾರೆ. ಏಳನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕಿಯ ಕಾರ್ಯವನ್ನು ಮೆಚ್ಚಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ತಮ್ಮ ಕಚೇರಿಗೆ ಕರೆಸಿಕೊಂಡು ಸನ್ಮಾನಿಸಿದರು.

ವೈಭವಿಗೆ ಪೇಟ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿ, ಬಾಲಕಿಯ ಸಮಯ ಪ್ರಜ್ಞೆ, ಧೈರ್ಯ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳು ಇಂತಹ ಗುಣ ಮೈಗೂಡಿಸಿಕೊಳ್ಳಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿ ಸಂತೋಷ್‌ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕಿ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿ ಪಾಲಕರು ಇದ್ದರು. ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.