ADVERTISEMENT

ಮಂಗಳೂರು: ಮೂಲ್ಕಿ ಜಯಾನಂದಗೆ ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 8:30 IST
Last Updated 19 ಆಗಸ್ಟ್ 2022, 8:30 IST
ಮೂಲ್ಕಿ ಜಯಾನಂದ ದೇವಾಡಿಗ
ಮೂಲ್ಕಿ ಜಯಾನಂದ ದೇವಾಡಿಗ   

ಮಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಅಂಗವಾಗಿ ನೀಡುವ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಜಯಾನಂದ ದೇವಾಡಿಗ ಅವರನ್ನು ಆಯ್ಕೆ ಮಾಡಲಾಗಿದೆ.

ಜಯಾನಂದ ದೇವಾಡಿಗ ಅವರು ಡಿ. ದೇವರಾಜ ಅರಸು ಅವರ ಚಿಂತನೆ, ಆದರ್ಶ ತತ್ವಗಳಿಗೆ ಧ್ವನಿಯಾಗಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ, ನಿರಂತರವಾಗಿ ಹೋರಾಟ ಮಾಡಿದವರು. ದೇವರಾಜ ಅರಸು ಅವರು ಕಾರ್ಯಗತಗೊಳಿಸಿದ ಯೋಜನೆ,
ಕಾರ್ಯಕ್ರಮಗಳನ್ನು ಹಿಂದುಳಿದ ವರ್ಗಗಳ ಸಮುದಾಯಕ್ಕೆ ತಲುಪಿಸಲು ನಿರಂತರವಾಗಿ ಶ್ರಮಿಸಿದವರು. ಹಿಂದುಳಿದ ವರ್ಗಗಳ ಶಿಕ್ಷಣ, ಆರ್ಥಿಕ ಅಭಿವೃದ್ಧಿಗಾಗಿ, ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದವರು.

ಆ.20ರ ಮಧ್ಯಾಹ್ನ 2.30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ‌ ಸುನಿಲ್ ಕುಮಾರ್ ಅವರು ಮೂಲ್ಕಿ ಜಯಾನಂದ ದೇವಾಡಿಗ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ₹ 50 ಸಾವಿರ ನಗದನ್ನು ಒಳಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.